ಜೂನ್ 6 ರಂದು ವಿಶ್ವ ಪರಿಸರ ದಿನಾಚರಣೆ: ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆ

2 years ago

ಧಾರವಾಡ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ 1000 ಪದಗಳಿಗೆ ಮೀರದಂತೆ) ಮತ್ತು ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆ ಪರಿಣಾಮಗಳು ಎಂಬ ವಿಷಯದ ಮೇಲೆ ಜೂನ್ 6, 2024 ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಸಲಾಗುವುದು.

ಪ್ರಬಂಧಗಳನ್ನು ಕಳುಹಿಸಲು ಮೇ 27, 2024 ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಸುವಂತಹ (ಇಬ್ಬರು ವಿದ್ಯಾರ್ಥಿಗಳ ಗುಂಪು) ವಿದ್ಯಾರ್ಥಿಗಳು ಅಕಾಡೆಮಿಯ ಇಮೇಲ್ ksta.gok@gmail.com ಮೇ 27, 2024 ರೊಳಗಾಗಿ ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ ಸೈಟ್ https://kstacdemy.in ವೀಕ್ಷಿಸಬಹುದು ಅಥವಾ ಅಕಾಡೆಮಿಯ ವೈಜ್ಞಾನಿಕಾಧಿಕಾರಿಯಾದ ಡಾ. ಆನಂದ ಆರ್. ಇವರ ಮೊಬೈಲ್ ಸಂಖ್ಯೆ 9880405181 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮುಖ್ಯ ಕಾರ್ಯನಿರ್ವಾಹಕ ಎ.ಎಂ.ರಮೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply