ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬೂದಾಳ್ ರಸ್ತೆಯ ಎಸ್ಪಿಎಸ್ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.




