ನಾವು ಭಕ್ತಿಭಾವದಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರ ಜೀವಿಗಳಿಗೆ ಹಾನಿಯಾಗಬಾರದು. ಆದ್ದರಿಂದ ಎಲ್ಲರೂ ಪಿಓಪಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪ ಮೂರ್ತಿಗಳನ್ನು ಪೂಜಿಸಿ ವಿಸರ್ಜಿಸಬೇಕು ಎಂದು ನಾನು ವಿನಂತಿಸುತ್ತೇನೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸಲಾಗುತ್ತಿದೆ. ಆ ಜಿಲ್ಲೆಗಳಲ್ಲಿ ಸಾಧ್ಯವಾಗುತ್ತಿರುವುದಾದರೆ ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಾಗಬಾರದು? ಈ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು.
POP ಗೌರಿ-ಗಣೇಶ ಮೂರ್ತಿಗಳು ನೀರಿನಲ್ಲಿ ಕರಗುವುದಿಲ್ಲ. ಜೊತೆಗೆ ವಿಷಕಾರಕ ಅಂಶಗಳನ್ನು ನೀರಿನಲ್ಲಿ ಸೇರಿಸುತ್ತವೆ. ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ಜಲಚರಗಳ ಸಾವಿಗೆ ಕಾರಣವಾಗುತ್ತವೆ.
ಇಡೀ ಜಗತ್ತೇ ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲನ್ನು ಎದುರಿಸುತ್ತಿದೆ. ಅತಿವೃಷ್ಟಿ, ಅನಾಹುತಗಳು ಹೆಚ್ಚುತ್ತಿರುವ ಈ ಸಮಯದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ.
ಗಣೇಶೋತ್ಸವವನ್ನು ಆಚರಿಸುವ ಎಲ್ಲರೂ ಪರಿಸರ ಸ್ನೇಹಿಯಾಗಿ ವರ್ತಿಸಿ ಮುಂದಿನ ಪೀಳಿಗೆಗೆ ಹಸಿರು ಭೂಮಿಯನ್ನು ಉಳಿಸೋಣ.
– ಈಶ್ವರ್ ಖಂಡ್ರೆ, ಪರಿಸರ ಸಚಿವ




