ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಿದ್ದು, ನಾಳೆ ಕ್ಯಾಮರಾ ಕಣ್ಗಾವಲಿನಲ್ಲಿ 402 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯುತ್ತಿದೆ. ಯಾವುದೇ ಗೊಂದಲ ಮತ್ತು ವಿವಾದಗಳಿಗೆ ಅವಕಾಶವಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ.
ಕಮಾಂಡ್ ಸೆಂಟರ್: ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ವಿವರಿಸಿದ್ದಾರೆ
ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.
ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು. ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ ಎಂದರು.




