ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಭವ ಆರಂಭವಾಗಿದ್ದು, ನೈರುತ್ಯ ಮಾರುತಗಳು ರಾಜ್ಯಾದ್ಯಂತ ಉತ್ತಮ ಮಳೆ ಸುರಿಸಿವೆ. ಉತ್ತಮವಾಗಿ ಮಳೆಯಾಗುತ್ತಿರುವುದು ರಾಜ್ಯದ ರೈತಾಪಿ ಸಮುದಾಯದಲ್ಲಿ ಅತೀವ ಹರ್ಷಕ್ಕೆ ಕಾರಣವಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಇದರ ನಡುವೆ ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹಳದಿ ಮುನ್ನೆಚ್ಚರಿಕೆ (ಯಲ್ಲೋ ಅಲರ್ಟ್)ಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಳಗಾವಿ, ವಿಜಯಪುರ, ಕೊಪ್ಪಳ. ಗದಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ.
ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಆದರೆ. ಕೆಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ. ಒಮ್ಮೊಮ್ಮೆ ಬಲವಾದ ಮೇಲೈಗಾಳಿ ಬೀಸಲಿದೆ. ಗಂಟೆಗೆ 40 ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ರಾಜ್ಯದೆಲ್ಲೆಡೆ ಮಳೆಯಾಗಿದ್ದು, ಬೆಳಗಾವಿ, ಬಾಗಲಕೋಟೆಯಲ್ಲಿ 9 ಸೆ.ಮೀ. ಮಳೆಯಾಗಿದೆ. ಯಾದಗಿರಿ, ಕೊಪ್ಪಳ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದಿದೆ.



