ಬೆಂಗಳೂರು: ಆರ್ಎಂಎಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಗ್ರಂಥಪಾಲಾಕಿಯಾಗಿ ಕೆಲಸ ಮಾಡುತ್ತಿರುವ ಯುವ ಕವಯಿತ್ರಿ ಕವಿತಾ ವಿ ಬಣಕಾರ್ ಅವರ “ವಿದ್ರುಮ” ಕವನ ಸಂಕಲನವನ್ನು ಆರ್ಎಂಎಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪುಸ್ತಕ ಬಿಡುಗಡೆಗೊಳಿಸಿ ಹಾರೈಸಿದ ಶಾಲೆಯ ಪ್ರಾಂಶುಪಾಲರಾದ ಸುಮಾ ಪ್ರಸಾದ್, ಶಾಲೆಯಲ್ಲಿ ಬಿಡುವಿಲ್ಲದೆ ಕಾರ್ಯೋನ್ಮುಖವಾಗಿರುವ ಗ್ರಂಥಪಾಲಕಿಯೊಬ್ಬರು ಇಂತಹ ಸದಭಿರುಚಿಯನ್ನು ಬೆಳೆಸಿಕೊಂಡು ಕವನ ಸಂಕಲನವೊಂದನ್ನು ಹೊರತಂದಿರುವ ಅಪರೂಪದ ವಿಶೇಷ ಸಾಧನೆ. ಇದು ಇಂದಿನ ಯುವಪೀಳಿಗೆಗೆ ಮಾದರಿಯೂ ಆಗಿದೆ. ಹೀಗೆಯೇ ಇಂತಹ ಹೆಚ್ಚು ಹೆಚ್ಚು ಮೌಲ್ಯಯುತವಾದ ಪುಸ್ತಕಗಳನ್ನು ಕವಿತಾ ವಿ ಬಣಕಾರ್ ಅವರು ಹೊರತರುವಂತೆ ಆಗಲಿ ಎಂದರು.
ಶಾಲೆಯ ಸಹ ಶಿಕ್ಷಕರಾದ ಶಾಲಿನಿ ಎಸ್ ಆರ್, ಭಾರತಿ ಎಮ್ , ಸುಮಾ ಗೌಡ ಹಾಗೂ ಮುಂತಾದ ಸಹ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು. ಕನ್ನಡ ಟೈಮ್ಸ್ ಪಬ್ಲಿಕೇಷನ್ಸ್ ಇದನ್ನು ಪ್ರಕಟಿಸಿದೆ.




