ಬೆಂಗಳೂರು: ಆರ್ಎಂಎಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಗ್ರಂಥಪಾಲಾಕಿಯಾಗಿ ಕೆಲಸ ಮಾಡುತ್ತಿರುವ ಯುವ ಕವಯಿತ್ರಿ ಕವಿತಾ ವಿ ಬಣಕಾರ್ ಅವರ “ವಿದ್ರುಮ” ಕವನ ಸಂಕಲನವನ್ನು ಆರ್ಎಂಎಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪುಸ್ತಕ ಬಿಡುಗಡೆಗೊಳಿಸಿ ಹಾರೈಸಿದ ಶಾಲೆಯ ಪ್ರಾಂಶುಪಾಲರಾದ ಸುಮಾ ಪ್ರಸಾದ್, ಶಾಲೆಯಲ್ಲಿ ಬಿಡುವಿಲ್ಲದೆ ಕಾರ್ಯೋನ್ಮುಖವಾಗಿರುವ ಗ್ರಂಥಪಾಲಕಿಯೊಬ್ಬರು ಇಂತಹ ಸದಭಿರುಚಿಯನ್ನು ಬೆಳೆಸಿಕೊಂಡು ಕವನ ಸಂಕಲನವೊಂದನ್ನು ಹೊರತಂದಿರುವ ಅಪರೂಪದ ವಿಶೇಷ ಸಾಧನೆ. ಇದು ಇಂದಿನ ಯುವಪೀಳಿಗೆಗೆ ಮಾದರಿಯೂ ಆಗಿದೆ. ಹೀಗೆಯೇ ಇಂತಹ ಹೆಚ್ಚು ಹೆಚ್ಚು ಮೌಲ್ಯಯುತವಾದ ಪುಸ್ತಕಗಳನ್ನು ಕವಿತಾ ವಿ ಬಣಕಾರ್ ಅವರು ಹೊರತರುವಂತೆ ಆಗಲಿ ಎಂದರು.
ಶಾಲೆಯ ಸಹ ಶಿಕ್ಷಕರಾದ ಶಾಲಿನಿ ಎಸ್ ಆರ್, ಭಾರತಿ ಎಮ್ , ಸುಮಾ ಗೌಡ ಹಾಗೂ ಮುಂತಾದ ಸಹ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು. ಕನ್ನಡ ಟೈಮ್ಸ್ ಪಬ್ಲಿಕೇಷನ್ಸ್ ಇದನ್ನು ಪ್ರಕಟಿಸಿದೆ.




