ಬೆಂಗಳೂರು: ಯುವಕನೊಬ್ಬ ತನ್ನ ಸ್ನೇಹಿತೆಯನ್ನು ಭೇಟಿಯಾಗಲು ಬಂದು ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ರಮಾಬಾಯಿ ವಿಧ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿರುವ ತನ್ನ ಗೆಳತಿಯನ್ನು ಭೇಟಿಯಾಗಲು ಮಾಲೂರು ಮೂಲದ ಯುವಕ ಬಂದಿದ್ದಾನೆ. ಈ ವೇಳೆ ತನ್ನನ್ನು ಯಾರಾದರೂ ತಡೆಯಬಹುದು ಎಂದು ಭಾವಿಸಿದ ಆತ ಬುರ್ಖಾ ಧರಿಸಿ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ಬಂದಿದ್ದಾನೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ರಾತ್ರಿ 7 ಗಂಟೆ ರ ವೇಳೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಸಂಗತಿ ಬಯಲಾಗಿದೆ.
ಮಾಲೂರಿನಿಂದ ತನ್ನ ಸ್ನೇಹಿತೆಯನ್ನು ನೋಡಲು ಬಂದ ಆತನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಆತನ ಸ್ನೇಹಿತೆಯೇ ಹಾಸ್ಟೆಲ್ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ. ಇದಕ್ಕಾಗಿ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಅದನ್ನು ಧರಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾನೆ.
ಘಟನೆ ನಂತರ ಮುಂಜಾಗ್ರತ ಕ್ರಮವಾಗಿ ಹುಡುಗಿಯರ ಹಾಸ್ಟೆಲ್ಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




